ನಗರದ ಅಭಿವೃದ್ಧಿ ದೃಷ್ಠಿಯಿಂದ ಅನೇಕ ಕ್ರಮ: ವಿಡಿಎ ಅಧ್ಯಕ್ಷ ಶ್ರೀಹರಿ ಗೋಳಸಂಗಿ

ವಿಜಯಪುರ :ಫೆ ೮ : ನಗರದ ವಿವಿದೆಡೆ ೨೧ ಬಸ್ ಸೆಲ್ಟರ್ಗಳಿಗೆ ಅನೂಮೊದನೆ ನೀಡಲಾಗಿದ್ದು ಅದರಂತೆ ಉದ್ಯಾನವನ ಜಾಗೆಯಲ್ಲಿ ವಾಕಿಂಗ್ ಟ್ರಾö್ಯಕ್ಗಳನ್ನು ನಿರ್ಮಿಸುವಂತೆ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಹರಿ, ಗೋಳಸಂಗಿ ಅವರು ಸಂಬAದಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಸಭಾಭವನದಲ್ಲಿಂದು ವಾರ್ಷಿಕ ಬಜೆಟ ಮಂಡನೆ ಹಾಗೂ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿ ನಗರದ ಇಟಗಿ ಪೆಟ್ರೋಲ್ ಬಂಕ್ ಹತ್ತಿರ ತರಕಾರಿ ಪ್ಲಾಟ್ಪಾರ್ಮ್ಗಳನ್ನು ತೆರೆಯಲು ಯೋಜನೆ ರೂಪಿಸಿದ್ದು, ಇನ್ನು ಅನೇಕ ಅಭಿವೃದ್ಧಿ ಪರ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.
ಸಭೆಯಲ್ಲಿ ವಿಜಯಪುರ ನಗರ ಶಾಸಕ ಬಸವನಗೌಡ ಪಾಟೀಲ, (ಯತ್ನಾಳ) ಅವರು ನಗರದ ವಿವಿಧ ಸರಕಾರಿ ಕಟ್ಟಡಗಳ ಬಾಕಿ ಕಾಮಗಾರಿಗಳನ್ನು ಕೂಡಲೆ ಪೂರ್ಣಗೊಳಿಸಿ ಬಿಡುಗಡೆಯಾದ ಅನೂದಾನವನ್ನು ಸಮರ್ಪಕವಾಗಿ ಬಳಸಬೇಕು. ಟೆಂಡರ್ ಕಾಮಗಾರಿಗಳ ಸಮರ್ಪಕ ದಾಖಲೆಗಳನ್ನು ಒದಗಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಅದರಂತೆ ನಗರದ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಮುಂಬರುವ ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಈಗಿನಿಂದಲೇ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ನಗರದಲ್ಲಿ ಬೀದಿದೀಪಗಳ ನಿರ್ವಹಣೆಗೂ ಗಮನ ಹರಿಸುವಂತೆ ಅವರು ಸಂಭAದಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಅಗತ್ಯ ಮೂಲಭೂತ ಸೌಕರ್ಯಗಳ ಬಾಕಿ ಕೆಲಸ ಕಾರ್ಯಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಮತ್ತು ಜಿಲ್ಲಾ ಸರಕಾರಿ ಆಸ್ಪತ್ರೆಯ ಮುಂದೆ ದ್ವಿಚಕ್ರ ವಾಹನ ಮತ್ತು ಸೈಕಲ್ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ಕುರಿತು ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಪ್ರಮುಖ ವೃತ್ತಗಳಲ್ಲಿ ಹೈಮಾಸ್ಥ ದೀಪಗಳನ್ನು ಅಳವಡಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಉದ್ಯಾನವನಗಳಲ್ಲಿ ಅವಶ್ಯಕತೆವಿರುವ ಕಡೆ ಸಿಮೆಂಟ್ ಆಸನಗಳ ವ್ಯವಸ್ಥೆ ಕಲ್ಪಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ನಾಗಠಾಣ ಶಾಸಕ ದೇವಾನಂದ ಚವ್ಹಾಣ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಲಕ್ಷö್ಮಣ ಜಾಧವ್, ಸಂಗಣ್ಣ ಕರಡಿ, ವಿಕ್ರಮ ಗಾಯಕವಾಡ, ರೇವಣಸಿದ್ಧಪ್ಪ ಜಿರ್ಲಿ, ಸರೋಜಿಸಿ ಏವೂರ, ವಿಡಿಎ ಆಯುಕ್ತರಾದ ವಿಜಯಕುಮಾರ ಅಜೂರೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.